1. ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
|
2. ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
|
3. ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು.
|
4. ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
|
5. ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;
|
7. ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
|
8. ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
|
9. ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.
|
11. ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
|
12. ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.
|
14. ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
|
15. ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
|
16. ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
|
17. ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
|
19. ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ
|
21. ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
|
22. ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
|
26. ಇವನು ನಗ್ಗಾಯನ ಮಗನು; ಇವನು ಮಹಾಥನ ಮಗನು; ಇವನು ಮತ್ತಥೀಯನ ಮಗನು; ಇವನು ಶಿಮೀಯ ಮಗನು; ಇವನು ಯೋಸೇಫನ ಮಗನು; ಇವನು ಯೂದನ ಮಗನು;
|