2. ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು;
|
4. ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು.
|
5. ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
|
7. ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು.
|
8. ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ
|
9. ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ?
|
10. ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)--
|
12. ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
|
14. ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
|
15. ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು.
|
16. ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
|
17. ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
|
18. ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು.
|
19. ಅದಕ್ಕೆ ಯೇಸು ಅವರಿಗೆ--ಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ? ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ.
|
21. ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.
|
22. ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ
|
23. ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು.
|
26. ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.
|