2. ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.
|
3. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ?
|
4. ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
|
5. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ
|
6. ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
|
8. ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
|
11. ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು.
|
12. ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.
|
13. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
|
14. ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
|
19. ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
|
20. ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.
|
22. ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
|
23. ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
|
24. ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
|
27. ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು.
|
28. ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
|
29. ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.
|
30. ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.
|
31. ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
|
32. ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು
|
33. ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು.
|
34. ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.
|
36. ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
|