3. ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
|
4. ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
|
5. ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
|
7. ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
|
12. ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
|
13. ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
|
14. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.
|
15. ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
|
16. ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
|
18. ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ.
|
23. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
|
25. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
|
26. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.
|
27. ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
|
28. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.
|
29. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
|
30. ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
|
34. ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
|
35. ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
|
37. ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
|
39. ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
|