7. ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
|
10. ಇನ್ನು ಸ್ಪಲ್ಪ ಸಮಯದಲ್ಲಿ ದುಷ್ಟನು ಇರನು; ಹೌದು, ಅವನ ಸ್ಥಳವನ್ನು ನೀನು ಜಾಗ್ರತೆಯಾಗಿ ವಿಚಾರಿಸಿದರೂ ಇಗೋ, ಅದು ಇರು ವದಿಲ್ಲ.
|
14. ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
|
20. ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
|
24. ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
|
25. ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
|
28. ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
|
33. ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
|
34. ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.
|
36. ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
|
39. ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
|
40. ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
|