1. ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
|
2. ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು.
|
4. ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು.
|
5. ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು.
|
6. ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು.
|
7. ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
|
9. ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.
|
11. ಇದು ಕರ್ತನ ಕೆಲಸವೇ ಆಗಿತ್ತು. ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆಯಲ್ಲಾ ಎಂಬ ಈ ಬರಹವನ್ನು ನೀವು ಓದಲಿಲ್ಲವೋ ಎಂದು ಹೇಳಿದನು.
|
12. ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
|
13. ಅವರು ಆತನನ್ನು ಆತನ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯ ರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
|
14. ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
|
15. ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು.
|
16. ಅವರು ಅದನ್ನು ತಂದಾಗ ಆತನು ಅವರಿಗೆ--ಇದರ ರೂಪವು ಮತ್ತು ಮೇಲ್ಬರಹವು ಯಾರದು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ಕೈಸರನದು ಎಂದು ಉತ್ತರ ಕೊಟ್ಟರು.
|
17. ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು.
|
19. ಬೋಧಕನೇ, ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ತಕ್ಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು ಎಂದು ಮೋಶೆಯು ನಮಗೆ ಬರೆದಿರು ತ್ತಾನಷ್ಟೆ.
|
23. ಆದದ ರಿಂದ ಪುನರುತ್ಥಾನದಲ್ಲಿ ಅವರು ಎದ್ದಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ ಅಂದರು.
|
24. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ?
|
25. ಯಾಕಂ ದರೆ ಅವರು ಸತ್ತವರೊಳಗಿಂದ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮದುವೆ ಮಾಡಿಕೊಡು ವದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೂತರಂತೆ ಇರುತ್ತಾರೆ.
|
26. ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
|
27. ಯಾಕಂದರೆ ಆತನು ಸತ್ತವರಿಗಲ್ಲ, ಆದರೆ ಜೀವಿತರಿಗೆ ದೇವರಾಗಿದ್ದಾನೆ; ಆದದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪು ಮಾಡುತ್ತೀರಿ ಎಂದು ಹೇಳಿದನು.
|
28. ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.
|
29. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ.
|
30. ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ.
|
31. ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.
|
32. ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ.
|
33. ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.
|
34. ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
|
36. ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.
|
37. ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.
|
39. ಸಭಾಮಂದಿರಗಳಲ್ಲಿ ಮುಖ್ಯಪೀಠಗಳನ್ನೂ ಔತಣಗಳಲ್ಲಿ ಅತ್ಯುನ್ನತವಾದ ಸ್ಥಳಗಳನ್ನೂ ಪ್ರೀತಿಸುವವರಾದ ಶಾಸ್ತ್ರಿಗಳ ವಿಷಯವಾಗಿ ಎಚ್ಚರವಾಗಿರ್ರಿ;
|
40. ಇವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
|
41. ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.
|
43. ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
|
44. ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
|