3. ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
|
5. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?
|
6. ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
|
7. ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.
|
8. ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.
|
9. ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
|
10. ಆಗ ಆತನ ಶಿಷ್ಯರು ಆತನಿಗೆ-- ಒಬ್ಬ ಮನುಷ್ಯನ ಪರಿಸ್ಥಿತಿ ಯು ತನ್ನ ಹೆಂಡತಿಯೊಂದಿಗೆ ಹೀಗಿರುವದಾದರೆ ಮದು ವೆಯಾಗುವದು ಒಳ್ಳೇದಲ್ಲ ಅಂದಾಗ.
|
12. ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ
|
13. ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
|
14. ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು.
|
16. ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.
|
17. ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
|
18. ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
|
19. ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
|
20. ಆಗ ಆ ಯೌವನಸ್ಥನು ಆತನಿಗೆ--ಇವೆಲ್ಲವುಗಳನ್ನು ನಾನು ಬಾಲ್ಯದಿಂದಲೇ ಕೈಕೊಂಡಿದ್ದೇನೆ; ಇನ್ನು ನನಗೇನು ಕಡಿಮೆಯಾಗಿದೆ ಎಂದು ಕೇಳಿದನು.
|
21. ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
|
23. ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
|
24. ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
|
26. ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
|
27. ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
|
28. ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
|
29. ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನು
|