1. ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ,
|
2. ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.
|
5. ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ
|
7. ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
|
9. ಏಲಾಮಿನ ಅರಸನಾದ ಕೆದೊರ್ಲಗೋಮರನಿಗೂ ಜನಾಂಗಗಳ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸನಾದ ಅಮ್ರಾಫೆಲನಿಗೂ ಎಲ್ಲಸಾರಿನ ಅರಸನಾದ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್ ತಗ್ಗಿನಲ್ಲಿ ಯುದ್ಧಮಾಡಿದರು. ಐದು ಮಂದಿ ಅರಸರು ನಾಲ್ವರು ಅರಸರಿಗೆ ವಿರೋಧವಾಗಿದ್ದರು.
|
10. ಸಿದ್ದೀಮ್ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
|
13. ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
|
14. ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ
|
15. ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
|
16. ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು.
|
17. ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
|
19. ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
|
20. ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
|
22. ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
|
23. ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.
|
24. ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
|