2. ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
|
3. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
|
4. ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
|
6. ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು; ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.
|
8. ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.
|
9. ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.
|
10. ನಿಮ್ಮ ದ್ರಾಕ್ಷೇ ತೋಟದಲ್ಲಿ ಹಕ್ಕಲಾಯಬಾರದು ಇಲ್ಲವೆ ಪ್ರತಿಯೊಂದು ದ್ರಾಕ್ಷೆ ಯನ್ನೂ ಕೂಡಿಸಬಾರದು; ನೀವು ಅವುಗಳನ್ನು ಬಡವ ರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
|
13. ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
|
14. ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
|
15. ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
|
16. ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
|
17. ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
|
18. ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
|
19. ನೀನು ನನ್ನ ನಿಯಮಗಳನ್ನು ಕೈಕೊಳ್ಳಬೇಕು. ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ; ನಿನ್ನ ಹೊಲದಲ್ಲಿ ಮಿಶ್ರಿತವಾದ ಬೀಜಗಳನ್ನು ಬಿತ್ತಬೇಡ. ಇದಲ್ಲದೆ ನಾರೂ ಉಣ್ಣೆಯೂ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.
|
20. ಒಬ್ಬ ಗಂಡಸಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸು ವದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ ಇಲ್ಲವೆ ಅವಳಿಗೆ ಸ್ವಾತಂತ್ರ್ಯತೆ ಕೊಡ ದಿದ್ದರೆ ಅವಳು ಕೊರಡೆಯಿಂದ ಹೊಡೆಯಲ್ಪಡ ಬೇಕು; ಅವರಿಗೆ ಮರಣ ವಿಧಿಸಬಾರದು. ಯಾಕಂದರೆ ಅವಳು ಬಿಡುಗಡೆಯಾಗಿರಲಿಲ್ಲ.
|
22. ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.
|
23. ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು.
|
25. ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
|
28. ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
|
29. ನಿನ್ನ ಮಗಳು ಸೂಳೆಯಾಗುವಂತೆ ವ್ಯಭಿಚಾರಕ್ಕೆ ಬಿಡಬೇಡ; ಬಿಟ್ಟರೆ ಅದರಿಂದ ದೇಶವು ಸೂಳೆತನಕ್ಕೆ ಒಳಪಟ್ಟು, ದೇಶವು ಎಲ್ಲಾ ಕೆಟ್ಟತನದಿಂದ ತುಂಬು ವದು.
|
31. ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
|
32. ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
|
34. ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
|
36. ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
|