2. ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.
|
5. ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು.
|
6. ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು.
|
7. ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು.
|
9. ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
|
10. ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.
|
11. ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
|
13. ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು.
|
14. ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
|
15. ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
|
17. ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು , ಯೇಸು ಅವರ ಬಳಿಗೆ ಬಂದಿರಲಿಲ್ಲ.
|
19. ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.
|
21. ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.
|
22. ಆತನ ಶಿಷ್ಯರು ಹತ್ತಿದ ಒಂದೇ ದೋಣಿಯ ಹೊರತು ಮತ್ತೊಂದು ಅಲ್ಲಿ ಇರಲಿಲ್ಲವೆಂದೂ ಆತನ ಶಿಷ್ಯರು ಮಾತ್ರ ಹೋದರೆಂದೂ ಯೇಸು ತನ್ನ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಮರು ದಿನ ಸಮುದ್ರದ ಆಚೆಯಲ್ಲಿ ನಿಂತಿದ್ದ ಜನರು ನೋಡಿ ದ್ದರು.
|
23. (ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
|
24. ಆಗ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವದನ್ನು ಜನರು ನೋಡಿ ಅವರು ಸಹ ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
|
26. ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
|
27. ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
|
30. ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
|
31. ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.
|
32. ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
|
35. ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
|
37. ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
|
39. ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
|
40. ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
|
42. ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
|
44. ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
|
45. ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
|
51. ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
|
52. ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು.
|
53. ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
|
54. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
|
56. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.
|
57. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
|
58. ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
|
61. ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ?
|
63. ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
|
64. ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
|
65. ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು.
|
68. ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
|
70. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
|
71. ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
|