1. ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
|
3. ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
|
4. ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
|
5. ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
|
7. ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
|
8. ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
|
9. ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
|
10. ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.
|
11. ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
|
13. ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
|
16. ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
|
17. ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
|
18. ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
|
20. ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
|
21. ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
|
23. ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
|
24. ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
|
25. ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
|
26. ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
|
27. ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.
|
28. ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
|
29. ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
|
30. ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
|
31. ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.
|
32. ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
|