1. ಇಸ್ರಾಯೇಲ್ಯರೆಲ್ಲರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಕೂಡಿಬಂದು ಹೇಳಿ ದ್ದೇನಂದರೆ--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.
|
2. ಇದಲ್ಲದೆ ಪೂರ್ವದಲ್ಲಿ ಸೌಲನು ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವ ನಾಗಿಯೂ ಇದ್ದಿ; ಕರ್ತನಾದ ನಿನ್ನ ದೇವರು ನಿನಗೆ ಹೇಳಿದ್ದು--ನೀನು ನನ್ನ ಜನರಾದ ಇಸ್ರಾಯೇಲ್ಯರನ್ನು ಮೇಯಿಸುವವನಾಗಿಯೂ; ಇಸ್ರಾಯೇಲ್ಯರ ಮೇಲೆ ಅಧಿಕಾರಿಯಾಗಿರುವಿ ಎಂಬದು.
|
3. ಹಾಗೆಯೇ ಇಸ್ರಾ ಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದರು; ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು; ಕರ್ತನು ಸಮುವೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.
|
5. ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು.
|
6. ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
|
8. ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು.
|
10. ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು.
|
11. ದಾವೀದನ ಸಂಗಡ ಇದ್ದ ಪರಾಕ್ರಮಶಾಲಿಗಳ ಲೆಕ್ಕವೇನಂದರೆ--ಹಕ್ಮೋನಿಯನಾದ ಯಾಷೊಬ್ಬಾ ಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು; ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿ ಯನ್ನು ಎತ್ತಿ ಒಂದೇ ಸಾರಿ ಅವರನ್ನು ಕೊಂದು ಹಾಕಿದನು.
|
13. ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.
|
14. ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು.
|
15. ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು.
|
17. ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು.
|
18. ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತೆಗೆದುಕೊಂಡು ಬಂದರು.
|
19. ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
|
20. ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು.
|
21. ಈ ಮೂವರಲ್ಲಿ ಅವರಿಗೆ ಅವನು ಪ್ರಧಾನನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ಇಬ್ಬರಿಗಿಂತ ಅವನು ಘನವುಳ್ಳವನಾಗಿದ್ದನು;
|
22. ಕಬ್ಜಯೇಲಿನವ ನಾದ ಪರಾಕ್ರಮಶಾಲಿಯ ಮಗನಾದಂಥ ಯೆಹೋ ಯಾದನ ಮಗನಾದ ಬೆನಾಯನು ಅನೇಕ ಕ್ರಿಯೆಗ ಳನ್ನು ಮಾಡಿದನು; ಅವನು ಸಿಂಹದ ಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇನ್ನೊಮ್ಮೆ ಹಿಮದ ದಿವಸದಲ್ಲಿ ಇಳಿದು ಹೋಗಿ ಕುಣಿಯೊಳಗೆ ಒಂದು ಸಿಂಹವನ್ನು ಕೊಂದುಬಿಟ್ಟನು.
|
23. ಮತ್ತೊಮ್ಮೆ ಅವನು ಐದುಮೊಳ ಉದ್ದವಾದ ಐಗುಪ್ತ್ಯನನ್ನೂ ಕೊಂದುಬಿಟ್ಟನು; ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಈಟಿ ಇತ್ತು; ಅವನು ಒಂದು ಕೋಲು ಹಿಡುಕೊಂಡು ಅವನ ಬಳಿಗೆ ಹೋಗಿ, ಐಗುಪ್ತ್ಯನ ಕೈಯಿಂದ ಈಟಿಯನ್ನು ಕಿತ್ತುಕೊಂಡು ಅವನ ಈಟಿಯಿಂದಲೇ ಅವನನ್ನು ಕೊಂದು ಹಾಕಿದನು.
|
25. ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು.
|
26. ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿ ಗಳು ಯಾರಂದರೆ--ಯೋವಾಬನ ಸಹೋದರನಾದ ಅಸಾಹೇಲನು, ಬೇತ್ಲೆಹೇಮಿನವನಾದ ದೋದೋ ವಿನ ಮಗನಾದ ಎಲ್ಖಾನಾನು,
|
39. ಅಮ್ಮೋನ್ಯನಾದ ಚೆಲೆಕನು, ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹೊತ್ತುಕೊಂಡು ಹೋಗುವವನಾಗಿ ರುವ ಬೆರೋತ್ಯನಾದ ನಹರೈಯು,
|
46. ಮಹವೀಯನಾದ ಎಲೀ ಯೇಲನು, ಎಲ್ನಾಮನ ಮಕ್ಕಳಾದ ಯೇರಿಬೈಯನೂ ಯೋಷವ್ಯನೂ;ಮೋವಾಬ್ಯನಾದ ಇತ್ಮನು, ಎಲೀ ಯೇಲನು, ಓಬೆದನು, ಮೆಚಬಾಯದವ ನಾದ ಯಾಸಿಯೇಲನು.
|