3. ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
|
5. ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.
|
6. ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.
|
7. ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
|
8. ನಾನು ಅವರನ್ನು ಐಗುಪ್ತದಿಂದ ಬರ ಮಾಡಿದ ದಿನ ಮೊದಲುಗೊಂಡು ಈ ದಿನದ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿ ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡು ತ್ತಾರೆ.
|
9. ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.
|
11. ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.
|
12. ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.
|
13. ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು.
|
14. ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು.
|
15. ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು.
|
18. ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ.
|
19. ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು;
|
21. ಸಮುವೇಲನು ಜನರ ಮಾತುಗಳನ್ನೆಲ್ಲಾ ಕೇಳಿ ಅವುಗಳನ್ನು ಕರ್ತನಿಗೆ ಹೇಳಿದನು.ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು.
|
22. ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು.
|