1. ಹಿಜ್ಕೀಯನು ಆಳಲಾರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬೀಯಳು; ಇವಳು ಜೆಕರೀಯನ ಮಗಳಾಗಿದ್ದಳು.
|
3. ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.
|
4. ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ--
|
5. ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
|
6. ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.
|
7. ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು.
|
8. ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.
|
9. ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.
|
10. ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
|
11. ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
|
12. ಆಗ ಲೇವಿಯರಾದ ಕೆಹಾತ್ಯರ ಮಕ್ಕಳಲ್ಲಿ ಅಮಾಸೈ ಯನ ಮಗನಾದ ಮಹತನೂ ಅಜರ್ಯನ ಮಗನಾದ ಯೋವೇಲೂ ಮೆರಾರೀಯ ಮಕ್ಕಳಲ್ಲಿ ಅಬ್ದೀಯ ಮಗ ನಾದ ಕೀಷನೂ ಯಹಲ್ಲೇಲನ ಮಗನಾದ ಅಜ ರ್ಯನೂ ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹನೂ ಯೋವಾಹನ ಮಗನಾದ ಏದೆನೂ
|
14. ಜೆಕರ್ಯನೂ ಮತ್ತನ್ಯನೂ ಹೆಮಾನನ ಮಕ್ಕಳಲ್ಲಿ ಯೆಹೀಯೇಲನೂ ಶಿಮ್ಮನೂ ಯೆದುತೂನನ ಮಕ್ಕಳಲ್ಲಿ ಶೆಮಾಯನೂ ಉಜ್ಜೀಯೇಲನೂ ಎದ್ದರು.
|
15. ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು.
|
16. ಯಾಜ ಕರು ಕರ್ತನ ಆಲಯವನ್ನು ಶುಚಿಮಾಡಲು ಅದರ ಒಳಭಾಗದಲ್ಲಿ ಪ್ರವೇಶಿಸಿ ಕರ್ತನ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಕರ್ತನ ಮನೆಯ ಅಂಗಳದೊಳಗೆ ತಂದರು; ಆಗ ಲೇವಿಯರು ಅದನ್ನು ತೆಗೆದುಕೊಂಡು ಕಿದ್ರೋನು ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.
|
17. ಅವರು ಮೊದಲನೇ ತಿಂಗಳಿನ ಮೊದಲನೇ ದಿವಸ ದಲ್ಲಿ ಪರಿಶುದ್ಧ ಮಾಡಲು ಆರಂಭಿಸಿ ಆ ತಿಂಗಳ ಎಂಟನೇ ದಿವಸದಲ್ಲಿ ಕರ್ತನ ದ್ವಾರಾಂಗಳದ ವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಕರ್ತನ ಮನೆಯನ್ನು ಪರಿಶುದ್ಧಮಾಡಿ ಅದನ್ನು ಮೊದಲನೇ ತಿಂಗಳಿನ ಹದಿನಾರನೇ ದಿವಸದಲ್ಲಿ ತೀರಿಸಿದರು.
|
18. ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು.
|
19. ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು.
|
21. ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.
|
22. ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.
|
23. ಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.
|
24. ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,
|
25. ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
|
27. ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು.
|
28. ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು.
|
30. ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.
|
31. ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.
|
32. ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.
|
34. ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.
|
35. ಇದಲ್ಲದೆ ದಹನಬಲಿ ಗಳೂ ಸಮಾಧಾನದ ಬಲಿಗಳ ಕೊಬ್ಬೂ ದಹನ ಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳ ವಾಗಿದ್ದವು. ಹೀಗೆಯೇ ಕರ್ತನ ಆಲಯದ ಸೇವೆಯು ಸಿದ್ಧವಾಯಿತು.ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
|
36. ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
|