2. ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
|
3. ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
|
5. ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
|
6. ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
|
7. ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
|
8. ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
|
9. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
|
10. ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.
|
11. ಈ ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಆ ಕಾರ್ಯವನ್ನು ಪೂರ್ತಿ ಮಾಡಿರಿ.
|
12. ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
|
14. ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.
|
15. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.
|
16. ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
|
17. ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.
|
18. ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.
|
19. ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
|
21. ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
|
22. ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
|
23. ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
|