1. ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.
|
2. ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
|
4. ದಾವೀದನು ಯೂಫ್ರೇ ಟಿಸ್ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.
|
5. ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.
|
6. ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
|
8. ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು.
|
10. ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.
|
11. ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು
|
12. ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.
|
14. ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
|
17. ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
|
18. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
|