2. ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
|
6. ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
|
8. ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
|
10. ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.
|
11. ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
|
12. ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
|
13. ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
|
14. ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
|
15. ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
|
16. ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
|
18. ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
|
19. ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
|
21. ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
|
22. ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
|
24. ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.
|
25. ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
|
26. ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
|