1. ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
|
3. ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
|
5. ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು.
|
6. ಆತನ ದೇಹವು ತಾರ್ಷೀಷ್ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.
|
7. ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
|
8. ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.
|
9. ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು.
|
11. ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.
|
12. ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
|
13. ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
|
14. ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
|
15. ಅವನು ಯಾವಾಗ ನನಗೆ ಇಂಥ ಮಾತುಗಳನ್ನು ಹೇಳಿದನೋ ಆಗ ನಾನು ನನ್ನ ಮುಖ ವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.
|
16. ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
|
17. ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ.
|
19. ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
|
20. ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್ ಪ್ರಭುವು ಬರುವನು.ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
|
21. ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
|