1. ಇದಲ್ಲದೆ ಆತ್ಮನು ನನ್ನನ್ನು ಎತ್ತಿ ಕರ್ತನ ಆಲಯದ ಪೂರ್ವಬಾಗಲಿಗೆ ಮೂಡಣದಿಕ್ಕಿಗೆ ಅಭಿಮುಖವಾಗಿರುವ ಕಡೆಗೆ ತೆಗೆದುಕೊಂಡು ಹೋದನು. ಆಗ ಇಗೋ, ಬಾಗಲಿನ ಮುಂದೆ ಇಪ್ಪತ್ತೈದು ಮಂದಿ ಮನುಷ್ಯರು; ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗನಾದ ಯಾಜನ್ಯ ನನ್ನೂ ಬೆನಾಯನ ಮಗನಾದ ಪೆಲತ್ಯನನ್ನೂ ನೋಡಿ ದೆನು.
|
2. ಆಮೇಲೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗ ಳನ್ನು ಕಲ್ಪಿಸಿ ದುರಾಲೋಚನೆಗಳನ್ನು ಹೇಳಿ ಕೊಡುವ ವರಾದ ಈ ಜನರು--
|
5. ಕರ್ತನ ಆತ್ಮನು ನನ್ನ ಮೇಲೆ ಬಂದು ನನಗೆ ಹೇಳಿದ್ದೇನಂದರೆ--ಮಾತನಾಡು; ಕರ್ತನು--ಇಸ್ರಾ ಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಯಾಕಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನೂ ನಾನು ಬಲ್ಲೆನು.
|
7. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಅದರ ಮಧ್ಯದಲ್ಲಿ ಇಟ್ಟಿರುವ ಹತರಾದವರು ಅವರೇ ಮಾಂಸವಾಗಿದ್ದಾರೆ, ಈ ಪಟ್ಟಣವು ಹಂಡೆಯಾಗಿದೆ. ಆದರೆ ನಾನು ನಿಮ್ಮನ್ನು ಆದರಿಂದ ಹೊರಗೆ ತರುತ್ತೇನೆ.
|
8. ನೀವು ಕತ್ತಿಗೆ ಭಯಪಟ್ಟಿರಿ; ನಾನು ನಿಮ್ಮ ಮೇಲೆ ಒಂದು ಕತ್ತಿ ಯನ್ನು ತರುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
|
9. ನಾನು ನಿಮ್ಮನ್ನು ಅದರ ಮಧ್ಯದಿಂದ ಹೊರಗೆ ತೆಗೆದು ನಿಮ್ಮನ್ನು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನಿಮ್ಮಲ್ಲಿ ನ್ಯಾಯ ತೀರ್ಪುಗಳನ್ನು ನಡಿಸುವೆನು.
|
10. ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು.
|
11. ಈ ಪಟ್ಟಣವು ನಿಮ್ಮ ಹಂಡೆ ಯಾಗುವದಿಲ್ಲ, ನೀವು ಅದರ ಮಧ್ಯದಲ್ಲಿ ಮಾಂಸ ವಾಗುವದಿಲ್ಲ; ಆದರೆ ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ನ್ಯಾಯತೀರಿ ಸುವೆನು.
|
12. ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.
|
13. ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು.
|
15. ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ಹೌದು, ನಿನ್ನ ಸಹೋದರರಿಗೆ, ನಿನ್ನ ಸಮಸ್ತ ಬಂಧು ಗಳಿಗೆ, ಇಸ್ರಾಯೇಲಿನ ಮನೆತನದವರಿಗೆ, ಇವರೆಲ್ಲ ರಿಗೆ ಯೆರೂಸಲೇಮಿನ ನಿವಾಸಿಗಳು--ಕರ್ತನಿಂದ ದೂರ ಹೋಗಿರಿ, ಈ ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳಿದರು.
|
16. ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
|
17. ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್ ದೇಶವನ್ನು ನಿಮಗೆ ಕೊಡುತ್ತೇನೆ.
|
19. ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
|
20. ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
|
21. ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
|
22. ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು.
|
24. ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
|