1. ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
|
2. ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ.
|
3. ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ.
|
4. ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
|
6. ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
|
10. ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
|
11. ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ?
|
13. ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
|
16. ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
|
17. ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
|
21. ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
|
25. ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
|
26. ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
|