1. ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
|
2. ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
|
5. ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
|
6. ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.
|
7. ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು.
|
8. ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.
|
9. ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು.
|
10. ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
|
11. ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು.
|
12. ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.
|
13. ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು?
|
14. ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
|
16. ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.
|
19. ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
|
21. ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.
|
22. ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.
|
24. ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?
|
25. ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
|
26. ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.
|
28. ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.
|
29. ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.
|
30. ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.
|
31. ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು.
|
32. ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.
|
33. ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
|