3. ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
|
4. ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು;
|
5. ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು.
|
6. ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.
|
7. ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
|
9. ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,
|
10. ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
|
11. ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.
|
12. ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
|
13. ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
|
15. ಹಾಲು ಕೊಡುವ ಮೂವತ್ತು ಒಂಟೆಗಳು ಅವುಗಳ ಮರಿಗಳು, ನಾಲ್ವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಕತ್ತೆ ಮರಿಗಳು;
|
16. ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು.
|
17. ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆ
|
18. ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.
|
19. ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.
|
20. ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
|
22. ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು.
|
25. ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.
|
26. ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
|
28. ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
|
29. ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.
|
30. ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
|
32. ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
|