1. ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
|
2. ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
|
3. ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
|
8. ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
|
9. ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
|
11. ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
|
12. ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
|
13. ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
|
16. ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ
|
19. ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
|
20. ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.
|
21. ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
|
22. ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
|
23. ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
|
24. ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
|
25. ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
|
27. ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
|
29. ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ.
|
30. ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು.
|
31. ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
|
32. ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
|