2. ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
|
3. ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
|
4. ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
|
6. ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.
|
7. ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.
|
11. ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
|
12. ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
|
17. ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
|
19. ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
|
20. ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
|
21. ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
|