1. ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
|
2. ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ.
|
4. ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
|
5. ಒಣಗಿದ ಸ್ಥಳದಲ್ಲಿನ ಬಿಸಿಲಿನ ಹಾಗೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೋ ಹಾಗೆಯೇ ನಿನ್ನಿಂದ ಅವರ ಭೀಕರತೆಯನ್ನು ಕೀಳು ಸ್ಥಿತಿಗೆ ತರುವಿ.
|
6. ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
|
7. ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶಿಯರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ (ನಾಶ) ತೆಗೆದುಹಾಕುವನು.
|
8. ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
|
9. ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
|
10. ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
|
11. ಈಜುವವನು ಈಜುವದಕ್ಕೆ ತನ್ನ ಕೈಗಳನ್ನು ಹರಡಿಕೊಂಡ ಹಾಗೆ, ಆತನು ಅದರ ಮಧ್ಯೆ ತನ್ನ ಕೈಗಳನ್ನು ಚಾಚುವನು. ಅದರ ಗರ್ವವನ್ನು ಅವರ ಕೊಳ್ಳೆಯೊಂದಿಗೆ ತಗ್ಗಿಸಿ ಬಿಡುವನು.ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
|