2. ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.
|
3. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.
|
5. ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ
|
6. ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
|
7. ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
|
9. ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
|
10. ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
|
11. ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
|
12. ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
|
13. ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
|
14. ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
|
15. ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.
|
16. ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
|
17. ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸ ಲೇಮಿನ ಬೀದಿಗಳಲ್ಲಿಯೂ ಅವರು ಮಾಡುವದನ್ನು ನೀನು ನೋಡುವದಿಲ್ಲವೋ? ಆಕಾಶದ ರಾಣಿಗೆ ದೋಸೆಗಳನ್ನು ಮಾಡುವದಕ್ಕೂ ಬೇರೆ ದೇವರುಗಳಿಗೆ ಪಾನದರ್ಪಣೆಯನ್ನು ಹೊಯ್ಯುವದಕ್ಕೂ
|
18. ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
|
19. ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?
|
20. ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
|
21. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.
|
22. ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
|
23. ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
|
24. ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
|
25. ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.
|
26. ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
|
27. ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ.
|
28. ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
|
29. ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
|
30. ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
|
31. ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
|
32. ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
|
34. ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
|