1. ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
|
3. ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
|
4. ಅವನ ಕುಮಾರರು ಹೋಗಿ ತಮ್ಮ ತಮ್ಮ ಮನೆಗಳಲ್ಲಿ ಅವನವನ ದಿವಸದಲ್ಲಿ ಔತಣವನ್ನು ಮಾಡಿಸಿ ತಮ್ಮ ಸಂಗಡ ತಿನ್ನುವದಕ್ಕೂ ಕುಡಿಯುವ ದಕ್ಕೂ ತಮ್ಮ ಮೂವರು ಸಹೋದರಿಯರನ್ನು ಕರೆ ಕಳುಹಿಸುತ್ತಿದ್ದರು.
|
5. ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
|
7. ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದಿ ಅಂದನು. ಸೈತಾನನು ಕರ್ತನಿಗೆ ಪ್ರತ್ಯುತ್ತರವಾಗಿ--ಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ತಿರುಗಾಡಿ ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆದಾಡಿ ಬಂದೆನು ಅಂದನು.
|
8. ಕರ್ತನು ಸೈತಾನನಿಗೆ--ನನ್ನ ಸೇವಕನಾದ ಯೋಬನ ಮೇಲೆ ನೀನು ಗಮನವಿಟ್ಟೆಯಾ? ಅವನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲಗುವವನೂ ಆಗಿದ್ದಾನೆ ಅವನ ಹಾಗೆ ಭೂಮಿಯಲ್ಲಿ ಒಬ್ಬನೂ ಇಲ್ಲ ಅಂದನು.
|
10. ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.
|
11. ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.
|
12. ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
|
15. ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
|
16. ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
|
17. ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.
|
18. ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ
|
19. ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
|
21. ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
|