12. ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
|
13. ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
|
14. ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
|
15. ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
|
17. ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
|
18. ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
|
19. ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
|
21. ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು.
|
22. ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು.
|
23. ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
|
25. ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು.
|
26. ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ;
|
27. ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
|
29. ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
|
30. ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು.
|
31. ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು.
|
32. ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
|
33. ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.
|
38. ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
|
39. ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು.
|
40. ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
|
41. ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
|
42. 42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
|
43. ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
|
45. ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
|
46. ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
|
47. ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
|
48. ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
|
50. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು.ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
|
51. ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
|