1. ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
|
2. ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.
|
12. ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
|
13. ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.
|
14. ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ.
|
15. ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ
|
17. ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
|
18. ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.
|
19. ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
|
20. ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
|
21. ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
|
23. ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.
|
25. ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ
|
26. ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.
|
27. ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.
|
30. ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
|
31. ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
|