2. ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
|
3. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
|
4. ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.
|
5. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
|
8. ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.
|
11. ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ.
|
12. ನಾನು ಭೂಲೋಕ ದವುಗಳನ್ನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ; ಆದರೆ ಪರಲೋಕದವುಗಳನ್ನು ನಿಮಗೆ ಹೇಳಿದರೆ ಹೇಗೆ ನಂಬೀರಿ?
|
16. ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
|
17. ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
|
18. ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
|
19. ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
|
20. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
|
21. ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
|
22. ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.
|
23. ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
|
26. ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
|
28. ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.
|
29. ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
|
31. ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
|
32. ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ.
|
35. ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
|
36. ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
|