2. ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
|
3. ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.
|
4. ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು.
|
6. ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.
|
7. ಅದಕ್ಕೆ ಆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.
|
10. ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.
|
11. ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.
|
12. ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.
|
13. ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
|
14. ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
|
16. ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
|
18. ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
|
19. ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.
|
20. ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
|
23. ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
|
24. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
|
25. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
|
26. ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
|
28. ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,
|
29. ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
|
30. ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
|
32. ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
|
35. ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
|
36. ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
|
37. ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
|
39. ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
|
43. ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.
|
45. ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
|
46. ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
|