1. ನಾನು ಗೋಡೆಯನ್ನು ಕಟ್ಟಿಸಿ ಬಾಗಲುಗಳನ್ನು ನಿಲ್ಲಿಸಿದ ತರುವಾಯ ಬಾಗಲು ಕಾಯುವವರೂ ಹಾಡುಗಾರರೂ ಲೇವಿಯರೂ ನೇಮಿಸಲ್ಪಟ್ಟರು.
|
2. ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
|
3. ಆಗ ನಾನು ಅವರಿಗೆ--ಬಿಸಿಲು ಏರುವ ಪರ್ಯಂತರಕ್ಕೂ ಯೆರೂಸಲೇಮಿನ ಬಾಗಲುಗಳನ್ನು ತೆರೆಯಬಾರದು; ಇದಲ್ಲದೆ ನೀವು ಸವಿಾಪದಲ್ಲಿ ನಿಂತಿರುವಾಗ, ಕದಗ ಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ; ಯೆರೂಸಲೇಮಿನ ನಿವಾಸಿಗಳಿಂದ ಪ್ರತಿ ಮನುಷ್ಯನು ತನ್ನ ಕಾವಲಿನ ಲ್ಲಿಯೂ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾ ಗಿಯೂ ಕಾವಲಾಗಿರಲು ನೇಮಿಸಿರೆಂದು ಹೇಳಿದೆನು.
|
4. ಆಗ ಪಟ್ಟಣವು ವಿಸ್ತಾರವಾಗಿಯೂ ದೊಡ್ಡದಾ ಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚ ವಾಗಿದ್ದರು; ಮನೆಗಳು ಕಟ್ಟಲ್ಪಡಲಿಲ್ಲ.
|
5. ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸಲ್ಪಡುವ ಹಾಗೆ ಪ್ರಮುಖರನ್ನೂ ಅಧಿಕಾರಸ್ಥರನ್ನೂ ಜನರನ್ನೂ ಕೂಡಿಸಿ ಕೊಳ್ಳಲು ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿ ಸಿದನು. ಆಗ ನಾನು ಮೊದಲಿನಲ್ಲಿ ಬಂದವರ ವಂಶಾ ವಳಿಯ ಪತ್ರಿಕೆಯನ್ನು ಕಂಡೆನು.
|
6. ಅದರಲ್ಲಿ ಬರೆದ ದ್ದೇನಂದರೆ--ಬಾಬೆಲಿನ ಅರಸನಾದ ನೆಬೂಕದ್ನೆಚರನು ಸೆರೆಯಾಗಿ ತಕ್ಕೊಂಡು ಹೋದವರು ಸೆರೆಯಾಗಿ ಒಯ್ಯಲ್ಪಟ್ಟು ಸೆರೆಯಿಂದ ಹೊರಟು ಯೆರೂಸಲೇ ಮಿಗೂ ಯೆಹೂದಕ್ಕೂ
|
7. ತಮ್ಮ ತಮ್ಮ ಪಟ್ಟಣಕ್ಕೂ ಜೆರುಬ್ಬಾಬೆಲಿನ ಸಂಗಡ ಬಂದ ದೇಶದ ಮಕ್ಕಳು ಯಾರಂದರೆ ಯೇಷೂವನು, ನೆಹೆವಿಾಯನು, ಅಜ ರ್ಯನು, ರಗಮ್ಯನು, ನಹಮಾನೀಯನು, ಮೊರ್ದೆಕೈ ಯನು, ಬಿಲ್ಷಾನನು, ಮಿಸ್ಪೆರೆತನು, ಬಿಗ್ವೈಯು, ನೆಹೂಮನು, ಬಾಣನು, ಇಸ್ರಾಯೇಲ್ ಜನರ ಲೆಕ್ಕವು:
|
45. ದ್ವಾರಪಾಲಕರಾದ ಶಲ್ಲೂಮನ ಮಕ್ಕಳು ಅಟೇರನ ಮಕ್ಕಳು ಟಲ್ಮೋನನ ಮಕ್ಕಳು ಅಕ್ಕೂಬನ ಮಕ್ಕಳು ಹಟೀಟನ ಮಕ್ಕಳು ಶೋಬೈಯ ಮಕ್ಕಳೂ ನೂರ ಮೂವತ್ತೆಂಟು ಮಂದಿಯು.
|
61. ತೇಲ್ಮೆ ಲಹ ಗುಡ್ಡವು, ತೇಲ್ಹರ್ಷ ಗುಡ್ಡವು, ಕೆರೂಬದ್ದೋನ್, ಇಮ್ಮೇರ್ ಎಂಬ ಸ್ಥಳಗಳಿಂದ ಹೊರಟು ತಾವು ಇಸ್ರಾಯೇಲ್ಯರು ಹೌದೋ ಅಲ್ಲವೋ ಎಂದು ತಮ್ಮ ತಂದೆಗಳ ಮನೆಯನ್ನಾದರೂ ತಮ್ಮ ಸಂತಾನವನ್ನಾ ದರೂ ತೋರಿಸಲಾರದೆ ಇದ್ದವರು ಯಾರಂದರೆ
|
63. ಯಾಜಕರಲ್ಲಿ -- ಹೋಬಾಯನ ಮಕ್ಕಳೂ ಬರ್ಜಿಲ್ಲೈಯನ ವಂಶಸ್ಥನಾದ ಹಕ್ಕೋಚನ ಮಕ್ಕಳೂ; ಇವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಕುಮಾರ್ತೆಯರಲ್ಲಿ ಒಬ್ಬಳನ್ನು ತಕ್ಕೊಂಡ ಕಾರಣ ಅವರ ಹೆಸರಿನಿಂದ ಕರೆಯಲ್ಪಟ್ಟವನಾದನು.
|
64. ಇವರು ವಂಶಾವಳಿಯಾಗಿ ಬರೆಯಲ್ಪಟ್ಟವರಲ್ಲಿ ತಮ್ಮ ಹೆಸರು ಗಳನ್ನು ಹುಡುಕಿದರು; ಆದರೆ ಸಿಕ್ಕದೆ ಹೋದದ ರಿಂದ ಅವರು ಅಶುಚಿಯಾದವರೆಂದು ಎಣಿಸಲ್ಪಟ್ಟು ಯಾಜಕ ಉದ್ಯೋಗದಿಂದ ತೆಗೆದುಹಾಕಲ್ಪಟ್ಟರು.
|
65. ಇದಲ್ಲದೆ ತಿರ್ಷತನು ಅವರಿಗೆ ಊರಿಮ್ ತುವ್ಮೆಾಮ್ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು.
|
67. ಇವರ ಹೊರತಾಗಿ ಇವರ ದಾಸರೂ ದಾಸಿಗಳೂ ಏಳು ಸಾವಿ ರದ ಮುನ್ನೂರ ಮೂವತ್ತೇಳು ಮಂದಿಯೂ ಇವರ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರ ನಾಲ್ವತ್ತೈದು ಮಂದಿಯೂ ಇದ್ದರು.
|
70. ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು.
|
71. ಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು.
|
72. ಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು.ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
|
73. ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
|