2. ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.
|
6. ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.
|
8. ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.
|
9. ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.
|
10. ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
|
12. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
|
14. ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.
|
18. ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು.
|
22. ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು.
|
25. ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.
|
29. ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
|
31. ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ.
|
33. ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
|
35. ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
|