2. ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು.
|
3. ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್ ಮಕ್ಕಳ ಮುಖ್ಯಸ್ಥರಾಗಿದ್ದರು.
|
16. ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.
|
17. ಮೋಶೆ ಕಾನಾನ್ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿ
|
18. ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ
|
19. ಅವರು ವಾಸಿ ಸುವ ದೇಶವು ಎಂಥದ್ದೋ ಅದು ಒಳ್ಳೆಯದಾಗಿ ದೆಯೋ ಕೆಟ್ಟದ್ದಾಗಿದೆಯೋ ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ ಅವರು ವಾಸಿಸುವದು ಡೇರೆಗಳಲ್ಲಿಯೋ ಬಲವಾದ ಕೋಟೆಗಳಲ್ಲಿಯೋ ಎಂದೂ
|
20. ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.
|
22. ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
|
23. ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.
|
24. ಇಸ್ರಾಯೇಲ್ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು.
|
26. ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
|
27. ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.
|
28. ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು.
|
29. ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.
|
30. ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.
|
31. ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.
|
32. ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
|
33. ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
|