2. ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
|
3. ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
|
6. ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು
|
9. ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
|
10. ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
|
11. ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
|
12. ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.
|
13. ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!
|
14. ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
|
16. ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.
|
18. ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
|
19. ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.
|
22. ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
|
23. ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
|
24. ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
|
25. (ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
|
27. ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.
|
28. ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.
|
29. ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
|
30. ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
|
31. ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.
|
33. ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.
|
34. ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
|
35. ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
|
36. ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ
|
38. ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
|
40. ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.
|
43. ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.
|
44. ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
|
45. ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
|