1. ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ
|
2. ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--
|
3. ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.
|
4. ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವ ದರಿಂದ ಅವನ ಹೆಸರನ್ನು ತನ್ನ ಕುಟುಂಬದಿಂದ ಯಾಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಮಗೆ ಕೊಡು ಎಂದು ಹೇಳಿದರು.
|
7. ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು.
|
8. ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿ ನೀನು ಹೇಳಬೇಕಾದದ್ದೇನಂದರೆ--ಒಬ್ಬನು ಮಗನಿಲ್ಲದೆ ಸತ್ತರೆ ನೀವು ಅವನ ಸ್ವಾಸ್ತ್ಯವನ್ನು ಅವನ ಮಗಳಿಗೆ ಸೇರಿಸಬೇಕು.
|
9. ಆದರೆ ಅವನಿಗೆ ಮಗಳು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ಸಹೋದರರಿಗೆ ಕೊಡಬೇಕು. ಅವನಿಗೆ ಸಹೋದರರು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು.
|
10. ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ ಅವನ ಕುಟುಂಬ ಗಳಲ್ಲಿ ಅವನಿಗೆ ಸವಿಾಪವಾದ ಬಂಧುವಿಗೆ ಅವನ ಸ್ವಾಸ್ತ್ಯವನ್ನು ಕೊಡಬೇಕು; ಅವನೇ ಅದನ್ನು ಸ್ವತಂತ್ರಿಸಿಕೊಳ್ಳಲಿ.
|
12. ಆಗ ಕರ್ತನು ಮೋಶೆಗೆ--ನೀನು ಈ ಅಬಾ ರೀಮ್ ಪರ್ವತದ ಮೇಲೆ ಏರಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶವನ್ನು ನೋಡು.
|
14. ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
|
18. ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು
|
21. ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
|
22. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
|