2. ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.
|
3. ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು.
|
4. ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು
|
5. ಆಗ ಇಸ್ರಾಯೇ ಲ್ಯರು ಸಹಸ್ರಗಳಿಂದ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮನುಷ್ಯರು ಪ್ರತ್ಯೇಕಿಸಲ್ಪಟ್ಟರು.
|
6. ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.
|
8. ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
|
9. ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.
|
12. ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.
|
16. ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
|
19. ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
|
20. ಎಲ್ಲಾ ಬಟ್ಟೆಗಳನ್ನೂ ಚರ್ಮದ ಸಾಮಗ್ರಿಗಳನ್ನೂ ಮೇಕೆ ಕೂದಲಿನಿಂದ ಮಾಡಿದ್ದೆಲ್ಲವನ್ನೂ ಕಟ್ಟಿಗೆ ಸಾಮಗ್ರಿಗಳೆಲ್ಲವನ್ನೂ ಶುದ್ಧಮಾಡಬೇಕು ಎಂದು ಹೇಳಿದನು.
|
21. ಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋದ ಪಾಳೆಯದ ಮನುಷ್ಯರಿಗೆ--ಕರ್ತನು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ
|
23. ಬೆಂಕಿ ತಾಳುವ ವಸ್ತುಗಳನ್ನೆಲ್ಲಾ ನೀವು ಬೆಂಕಿಯಿಂದ ದಾಟಿಸಬೇಕು; ಆಗ ಅವು ಶುದ್ಧವಾಗುವವು. ಪ್ರತ್ಯೇಕ ವಾದ ನೀರಿನಿಂದ ಮಾತ್ರ ಅವುಗಳು ಪವಿತ್ರವಾಗ ಬೇಕು; ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ದಾಟಿಸಬೇಕು.
|
24. ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು; ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು.
|
26. ನೀನೂ ಯಾಜಕನಾದ ಎಲ್ಲಾಜಾರನೂ ಸಭೆಯ ಮುಖ್ಯ ಯಜಮಾನರೂ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಒಯ್ಯಲ್ಪಟ್ಟ ಸುಲಿಗೆಯ ಲೆಕ್ಕವನ್ನು ತಕ್ಕೊಳ್ಳಿರಿ.
|
28. ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು
|
30. ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.
|
41. ಆದರೆ ಮೋಶೆಯು ಕರ್ತನಿಗೆ ಎತ್ತುವ ಅರ್ಪಣೆಯಾಗಿರುವ ಕಪ್ಪವನ್ನು ಯಾಜಕನಾದ ಎಲ್ಲಾಜಾರನಿಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕೊಟ್ಟನು.
|
47. ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತಕ್ಕೊಂಡು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಟ್ಟನು.
|
49. ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು ಮೋಶೆಗೆ ಅವರು--ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಸ್ಥರ ಲೆಕ್ಕವನ್ನು ತಕ್ಕೊಂಡೆವು; ಅವರೊಳಗೆ ಒಬ್ಬನಾದರೂ ಕಡಿಮೆ ಯಾಗಲಿಲ್ಲ.
|
50. ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
|
52. ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕರ್ತನಿಗೆ ಅರ್ಪಿಸಿದ ಕಾಣಿಕೆಯ ಚಿನ್ನವೆಲ್ಲಾ ಹದಿನಾರು ಸಾವಿರದ ಏಳುನೂರ ಐವತ್ತು ಶೇಕೆಲುಗಳಾಗಿತ್ತು.
|
53. ಯುದ್ಧದ ಜನರಲ್ಲಿ ಒಬ್ಬೊಬ್ಬನು ತನ್ನ ಸ್ವಂತಕ್ಕಾಗಿ ಸುಲುಕೊಂಡಿ ದ್ದನು.ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
|
54. ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
|