3. ಅವರ ಪ್ರಯಾಣಗಳ ಹೊರಡೋಣಗಳು ಯಾವ ವೆಂದರೆ--ಅವರು ಮೊದಲನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪಸ್ಕ ಹಬ್ಬದ ಮರು ದಿವಸದಲ್ಲಿ ರಮ್ಸೇಸಿ ನಿಂದ ಹೊರಟರು; ಇಸ್ರಾಯೇಲ್ ಮಕ್ಕಳು ಸಮಸ್ತ ಐಗುಪ್ತ್ಯರ ಎದುರಿನಲ್ಲೇ ಜಯೋತ್ಸವದಿಂದ ಹೊರಟು ಹೋದರು.
|
4. ಹೇಗಂದರೆ ಕರ್ತನು ಅವರಲ್ಲಿ ಸಮಸ್ತ ಚೊಚ್ಚಲಿನವರನ್ನು ಹೊಡೆದದ್ದರಿಂದ ಐಗುಪ್ತ್ಯರು ಹೂಣಿಡುತ್ತಿದ್ದರು; ಕರ್ತನು ಅವರ ದೇವರುಗಳಿಗೂ ತೀರ್ಪು ಮಾಡಿದನು.
|
8. ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು.
|
9. ಮಾರಾದಿಂದ ಹೊರಟು ಏಲೀಮಿಗೆ ಬಂದರು; ಏಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರ ಮರಗಳೂ ಇದ್ದದ ರಿಂದ ಅಲ್ಲಿ ಇಳಿದುಕೊಂಡರು.
|
38. ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.
|
40. ಆಗ ಇಸ್ರಾಯೇಲ್ ಮಕ್ಕಳು ಬರುವದನ್ನು ಕಾನಾನ್ ದೇಶದ ದಕ್ಷಿಣದಲ್ಲಿ ವಾಸವಾಗಿದ್ದ ಕಾನಾನ್ಯ ರಿಗೆ ಅರಸನಾದ ಅರಾದನು ಕೇಳಿದನು.
|
48. ಅಬಾರೀಮ್ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು.
|
49. ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.
|
51. ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಯೊರ್ದನನ್ನು ದಾಟಿ ಕಾನಾನ್ ದೇಶಕ್ಕೆ ಬರುವಾಗ
|
52. ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು.
|
53. ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.
|
54. ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
|
55. ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
|