1. ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
|
8. ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
|
14. ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
|
15. ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
|
16. ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
|
23. ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
|
24. ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
|
25. ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
|
26. ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
|
27. ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
|
29. ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
|
30. ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
|