2. ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
|
3. ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.
|
5. ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
|
9. ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
|
10. ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.
|
11. ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
|
12. ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
|
13. ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
|
16. ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
|
17. (ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
|
18. ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.
|
19. ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
|
20. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
|
24. ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.
|
25. ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
|