2. ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ.
|
3. ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.
|
4. ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.
|
5. ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ
|
6. ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.
|
8. ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ; ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ.
|
13. ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
|
14. ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
|
18. ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ
|
19. ಅವನು ಎದ್ದು ಕೋಲೂರಿಕೊಂಡು ತಿರುಗಾಡು ವಾಗ ಅವನಿಗೆ ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಅವನ ನಷ್ಟವಾದ ಸಮಯಕ್ಕಾಗಿ ಮಾತ್ರ ಅವನಿಗೆ ಹಣ ಕೊಡಬೇಕು. ಅವನನ್ನು ಪೂರ್ಣ ಸ್ವಸ್ಥಮಾಡಿಸಬೇಕು.
|
22. ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.
|
26. ಇದಲ್ಲದೆ ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೋಸ್ಕರ ಅವನನ್ನು ಬಿಡುಗಡೆಮಾಡಿ ಅವನು ಕಳುಹಿಸಲಿ.
|
28. ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
|
29. ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.
|
30. ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.
|
32. ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
|
35. ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು.ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
|
36. ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
|