1. ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
|
2. ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
|
3. ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
|
4. ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ.
|
6. ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.
|
7. ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು.
|
8. ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು.
|
10. ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು.
|
11. ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
|
12. ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ.
|
13. ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
|
14. ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
|
15. ಇಲ್ಲವೆ ಐಗುಪ್ತದಲ್ಲಿ ತಲೆಯಾಗಲಿ ಬಾಲವಾಗಲಿ ಕೊಂಬೆಯಾಗಲಿ ಒಂದು ಕಡ್ಡಿಯಾಗಲಿ ಸಾಧಿಸಲು ಮಾಡತಕ್ಕ ಕೆಲಸವು ಒಂದಾದರೂ ಐಗುಪ್ತದ ಲ್ಲಿರುವದಿಲ್ಲ.
|
16. ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
|
17. ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೈನ್ಯಗಳ ಕರ್ತನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆ ಯನ್ನು ತಿಳಿದು ಬೆರಗಾಗುವನು.
|
18. ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ.
|
20. ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
|
21. ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು.
|
22. ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು.
|
23. ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.
|
24. ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
|
25. ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
|