2. ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ.
|
3. ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
|
5. ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
|
6. ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು.
|
7. ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ;
|
8. ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು.
|
9. ಆ ದಿವಸಗಳಲ್ಲಿ ಆದದ್ದೇನಂದರೆ, ಯೇಸು ಗಲಿಲಾಯದ ನಜರೇತಿನಿಂದ ಬಂದು ಯೊರ್ದನಿನಲ್ಲಿ ಯೋಹಾನನಿಂದ ಬಾಪ್ತಿಸ್ಮಮಾಡಿಸಿಕೊಂಡನು.
|
10. ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು.
|
13. ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
|
15. ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
|
16. ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
|
17. ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.
|
19. ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು.
|
20. ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
|
22. ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
|
24. ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
|
27. ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
|
29. ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು.
|
31. ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.
|
34. ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
|
35. ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
|
38. ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.
|
40. ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು.
|
41. ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು.
|
44. ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.
|
45. ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
|