1. ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
|
2. ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
|
3. ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--
|
4. ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.
|
6. ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
|
8. ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
|
9. ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
|
11. ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು.
|
13. ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
|
14. ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
|
15. ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು.
|
16. ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು.
|
17. ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
|
19. ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವವು.
|
20. ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
|
22. ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
|
23. ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.
|
24. ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
|
25. ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
|