1. ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
|
4. ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
|
5. ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
|
6. ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
|
8. ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
|
11. ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು.
|
13. ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.
|
15. ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ
|
16. ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
|
17. ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
|
18. ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
|
19. ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.
|
20. ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.
|
21. ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.
|
22. ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
|
24. ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
|
25. ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
|
26. ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
|
30. ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
|
31. ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.
|
33. ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
|
34. ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು.
|
35. ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.
|
36. ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
|
37. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
|
39. ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
|
41. ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
|
42. ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
|
43. ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
|
44. ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
|
45. ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
|
46. ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
|