1. ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
|
2. ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
|
3. ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.
|
4. ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
|
5. ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.
|
6. ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
|
8. ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;
|
10. ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
|
11. ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
|
12. ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.
|
13. ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
|
14. ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
|
15. ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
|
16. ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
|
17. ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
|
18. ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
|
21. ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
|
22. ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
|
24. ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
|
25. ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
|
26. ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು.
|
27. ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
|
29. ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.
|
31. ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
|
33. ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
|
34. ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
|
36. ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
|
38. ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.
|
39. ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
|
40. ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
|
41. ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
|