1. ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.
|
2. ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು.
|
3. ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ.
|
4. ನೀನು ಏಳು; ಯಾಕಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ಇರುವೆವು; ಧೈರ್ಯದಿಂದಿರು, ಅದನ್ನು ಮಾಡು ಅಂದರು.
|
5. ಆಗ ಎಜ್ರನು ಎದ್ದು, ಪ್ರಧಾನಯಾಜಕರೂ ಲೇವಿಯರೂ ಸಮಸ್ತ ಇಸ್ರಾ ಯೇಲ್ಯರೂ ಈ ಮಾತಿನ ಪ್ರಕಾರವಾಗಿ ಮಾಡಲು ಅವರು ಆಣೆ ಇಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.
|
6. ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು.
|
7. ಆಗ ಸೆರೆಯ ಮಕ್ಕಳೆಲ್ಲರೂ ಯೆರೂಸಲೇಮಿಗೆ ಕೂಡಿ ಬರಬೇಕೆಂದು ಯೆಹೂದ ಮತ್ತು ಯೆರೂಸ ಲೇಮಿನಲ್ಲಿ ಎಲ್ಲೆಲ್ಲಿಯೂ ಪ್ರಕಟಿಸಿದರು.
|
8. ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು.
|
9. ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
|
10. ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ--ನೀವು ಇಸ್ರಾಯೇಲ್ಯರ ಅಪರಾಧ ವನ್ನು ಅಧಿಕವಾಗಿ ಮಾಡಲು ಅನ್ಯಸ್ತ್ರೀಯರನು್ನು ಮದುವೆಮಾಡಿಕೊಂಡದ್ದರಿಂದ ಅಕೃತ್ಯ ಮಾಡಿದಿರಿ.
|
11. ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ಈ ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು.
|
13. ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ.
|
14. ಆದಕಾರಣ ದಯಮಾಡಿ--ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು.
|
15. ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು.
|
16. ಸೆರೆ ಇರುವಿಕೆಯ ಮಕ್ಕಳು ಇದೇ ಪ್ರಕಾರ ಮಾಡಿದರು; ಆದದರಿಂದ ಯಾಜಕನಾದ ಎಜ್ರನು ತಮ್ಮ ತಂದೆಗಳ ಮನೆಯ ಪ್ರಕಾರ ತಂದೆಗಳಲ್ಲಿ ಪ್ರಮುಖರಾದ ಕೆಲ ವರು ಹೆಸರು ಹೆಸರಾಗಿ ಪ್ರತ್ಯೇಕಿಸಲ್ಪಟ್ಟು, ಈ ಕಾರ್ಯವನ್ನು ಶೋಧಿಸಲು ಹತ್ತನೇ ತಿಂಗಳ ಮೊದ ಲನೇ ದಿವಸದಲ್ಲಿ ಕುಳಿತುಕೊಂಡರು.
|
18. ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ.
|
19. ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
|
44. ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು.
|