1. ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
|
2. ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ
|
3. ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು.
|
4. ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
|
5. ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.
|
6. ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.
|
7. ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;--
|
26. ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು.
|
29. ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.
|
32. ಕರ್ತನು ಆಳುತ್ತಾನೆಂದು ಜನಾಂಗಗಳಲ್ಲಿ ಹೇಳಲಿ. ಸಮುದ್ರವೂ ಅದರ ಪರಿಪೂರ್ಣತ್ವವೂ ಘೋಷಿಸಲಿ; ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹ ಪಡಲಿ.
|
35. ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.
|
36. ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
|
37. ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
|
38. ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.
|
39. ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ
|
41. ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
|
42. ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
|