4. ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
|
5. ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
|
6. ತರುವಾಯ ಕರ್ತನು ನನಗೆ ಹೇಳಿದ್ದೇನಂದರೆ--ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸಾರಿ ಹೇಳು, ಹೇಗಂದರೆ--ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ಅವುಗಳನ್ನು ಮಾಡಿರಿ.
|
7. ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
|
8. ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
|
9. ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
|
10. ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
|
11. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
|
12. ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
|
13. ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
|
14. ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
|
15. ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
|
16. ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
|
17. ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.
|
19. ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
|
20. ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.
|
21. ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
|
22. ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.
|
23. ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
|