2. ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.
|
3. ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.
|
4. ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.
|
7. ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
|
8. ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.
|
9. ಇದಲ್ಲದೆ ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ನಾಶನವನ್ನು ಪ್ರಸಿದ್ಧಿಪಡಿಸಿ, ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.
|
10. ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.
|
12. ಪರಾಕ್ರಮ ಶಾಲಿಗಳ ಕತ್ತಿಗಳಿಂದ ಜನಾಂಗಗಳಲ್ಲಿ ಭಯಂಕರ ರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು; ಅವರು ಐಗುಪ್ತದ ಮಹತ್ತನ್ನು ಕೆಡಿಸು ವರು; ಅದರ ಜನಸಮೂಹವೆಲ್ಲಾ ಹಾಳಾಗುವದು.
|
13. ನಾನು ಆ ಬಹುಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು; ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಕಾಲಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವದಿಲ್ಲ.
|
14. ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು; ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡು ವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
|
15. ನಾನು ಐಗುಪ್ತದೇಶವನ್ನು ಹಾಳು ಮಾಡುವಾಗ, ಆ ದೇಶವು ಪರಿಪೂರ್ಣವಾಗಿ ಹಾಳಾಗುವಾಗ ಮತ್ತು ನಾನು ಅವರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
|
16. ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ; ಐಗುಪ್ತದ ವಿಷಯವಾಗಿಯೂ ಅದರ ಎಲ್ಲಾ ಜನ ಸಮೂಹದ ವಿಷಯವಾಗಿಯೂ ಜನಾಂಗಗಳ ಕುಮಾರ್ತೆಯರು ಇದನ್ನು ಕುರಿತು ಗೋಳಾಡುವರು; ಎಂದು ದೇವರಾದ ಕರ್ತನು ಹೇಳುತ್ತಾನೆ.
|
18. ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು.
|
20. ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ.
|
21. ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ.
|
22. ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ.
|
23. ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು.
|
24. ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
|
25. ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ.
|
26. ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು.
|
27. ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು.
|
29. ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು.
|
30. ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.
|
31. ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
|
32. ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
|